ಅದ್ಯಾಯ 21

ನೂತನ ಭೂಮ್ಯಾಕಾಶಗಳನ್ನು ಕುರಿತದ್ದು 1 ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆನು. ಮೊದಲಿನ ಆಕಾಶಮಂಡಲವೂ ಮೊದಲಿನ ಭೂಮಂಡಲವೂ ಗತಿಸಿ ಹೋದವು. ಇನ್ನು ಸಮುದ್ರಗಳೂ ಇಲ್ಲ. 2 ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. 3 ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು - <<ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು. 4 ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು>> ಎಂದು ಹೇಳಿತು. 5 ಸಿಂಹಾಸನದ ಮೇಲೆ ಕುಳಿತಿದ್ದಾತನು, <<ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ>> ಎಂದನು. ಮತ್ತು ಒಬ್ಬನು ನನಗೆ – <<ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ>> ಎಂದು ಹೇಳಿದನು. 6 ಸಿಂಹಾಸನದ ಮೇಲೆ ಕುಳಿತಿದ್ದಾತನು, <<ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕುಡಿಯುವುದಕ್ಕೆ ಕೊಡುವೆನು. 7 ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು. 8 ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು>> ಎಂದು ನನಗೆ ಹೇಳಿದನು. ಹೊಸ ಯೆರೂಸಲೇಮನ್ನು ಕುರಿತದ್ದು 9 ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ – <<ಬಾ ಯಜ್ಞದ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು>> ಎಂದು ಹೇಳಿ, 10 ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ದೇವರ ತೇಜಸ್ಸುಳ್ಳದ್ದಾಗಿ ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. 11 ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಥಳಥಳಿಸುವ ವಜ್ರವೋ ಎಂಬಂತೆ ಕಾಣಿಸುತ್ತಿತ್ತು. 12 ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. 13 ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. 14 ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. 15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನು ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. 16 ಆ ಪಟ್ಟಣವು ಚೌಕಾಕಾರವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಹದಿನೈದು ನೂರು ಮೈಲಿಗಳಾಗಿತ್ತು. ಅದರ ಉದ್ದವು ಅಗಲವು ಎತ್ತರವು ಸಮವಾಗಿದ್ದವು. 17 ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು ನೂರನಾಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ [ಎಂದರೆ ದೇವದೂತನ ಮೊಳ]. 18 ಆ ಗೋಡೆಯು ಸೂರ್ಯಕಾಂತಿ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. 19 ಪಟ್ಟಣದ ಗೋಡೆಯು ಮತ್ತು ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೇಯದು ವೈಡೂರ್ಯ ಮೂರನೇಯದು ಪಚ್ಚೆ. 20 ಪದ್ಮರಾಗ, ಐದನೇಯದು ಗೋಮೇಧಿಕ, ಆರನೇಯದು ಮಾಣಿಕ್ಯ, ಏಳನೇಯದು ಪೀತರತ್ನ, ಎಂಟನೇಯದು ಗೋಮೇಧಿಕ. ಒಂಭತ್ತನೇಯದು ಪುಷ್ಯರಾಗ ಹತ್ತನೆಯದು ಗರುಡಪಚ್ಚೆ, ಹನ್ನೊಂದನೇಯದು ಇಂದ್ರನೀಲ, ಹನ್ನೆರಡನೇಯದು ನೀಲಸ್ಫಟಿಕ, 21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. 22 ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತವಾಗಿರುವ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾನೆ. 23 ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ. ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು. 24 ಬೆಳಕಿನಿಂದ ದೇಶಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು. 25 ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. 26 ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ. ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. 27 ಅದರಲ್ಲಿ ಅಶುದ್ಧವಾದದ್ದೊಂದೂ ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.